ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್,6 ತಿಂಗಳ ತನಕ ಉಚಿತ ಪಡಿತರ ಸೌಲಭ್ಯ ವಿಸ್ತರಣೆ…
ಕೇಂದ್ರದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳಿಗೆ ಮುಂದಿನ 6 ತಿಂಗಳವರೆಗೆ ಉಚಿತ ಪಡಿತರ ವಿಸ್ತರಿಸಲಿದೆ. ಉಚಿತ ಪಡಿತರವನ್ನು ನೀಡುವ ಯೋಜನೆಯನ್ನು ಇದೇ ತಿಂಗಳ ಸೆಪ್ಟೆಂಬರ್ 30 ರಿಂದ ವಿಸ್ತರಿಸಲು ಸರ್ಕಾರ ಶೀಘ್ರದಲ್ಲೇ ಘೋಷಿಸಲಿದೆ.
ಪ್ರಸ್ತುತ ಕೇಂದ್ರ ಸರ್ಕಾರ ಬಿಪಿಎಲ್ ಕುಟಂಬಗಳಿಗೆ ತಲಾ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ನೀಡುತ್ತಿದೆ ಮತ್ತು ಸರ್ಕಾರ ಅದನ್ನು ಮುಂದಿನ 3 ರಿಂದ 6 ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ಈ ಕುರಿತು ಮಾಹಿತಿ ನೀಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ಉಚಿತ ಪಡಿತರ ಯೋಜನೆಯನ್ನು ಸೆಪ್ಟೆಂಬರ್ 30 ರ ನಂತರ ವಿಸ್ತರಿಸಲು ಸರ್ಕಾರ ಯೋಜಿಸುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಯೋಜನೆಯನ್ನು 2020ರ ಮಾರ್ಚ್ ನಲ್ಲಿ ಆರಂಭಿಸಲಾಗಿದ್ದು, ಈ ಯೋಜನೆ ಅಡಿ 5 ಕೆ.ಜಿ. ಉಚಿತ ಪಡಿತರ ವಿತರಿಸಲಾಗುತ್ತಿದೆ. ಇದೀಗ ಈ ಯೋಜನೆಯನ್ನು ಮತ್ತೆ ಮೂರು ಅಥವಾ ಆರು ತಿಂಗಳ ಕಾಲ ವಿಸ್ತರಿಸಲಾಗುತ್ತದೆ ಎಂದು ಹೇಳಲಾಗಿದೆ.
ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಈ ಮಾಹಿತಿ ನೀಡಿದ್ದು, ಸೆಪ್ಟೆಂಬರ್ 30ರ ನಂತರ ಈ ಯೋಜನೆಯನ್ನು ಮುಂದಿನ ಮೂರು ಅಥವಾ ಆರು ತಿಂಗಳುಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಆದರೆ ಯಾವಾಗ ಈ ಕುರಿತಂತೆ ನಿರ್ಧಾರ ಹೊರಬೀಳಲಿದೆ ಎಂಬುದರ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ದೇಶದಾದ್ಯಂತ 80 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರವನ್ನು ಒದಗಿಸಲಾಗಿದೆ. ಈ ಯೋಜನೆ ಮತ್ತಷ್ಟು ಕಾಲ ಮುಂದುವರೆದರೆ ಬಡ ಜನತೆಗೆ ಅನುಕೂಲವಾಗಲಿದೆ.