ಮಾರಿಮುತ್ತು

ಮದುವೆಯಾದ ವ್ಯಕ್ತಿ ಜೊತೆ ನನಗೆ ಸಂಬಂಧ ಇತ್ತು,ಜೀವನದ ಸತ್ಯ ಬಿಚ್ಚಿಟ್ಟ ಮಾರಿಮುತ್ತು ಮೊಮ್ಮಗಳು…

CINEMA/ಸಿನಿಮಾ Entertainment/ಮನರಂಜನೆ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಒಟಿಟಿ ಕನ್ನಡ ಅದ್ದೂರಿಯಾಗಿ ಆರಂಭವಾಗಿದೆ. ಆಗಸ್ಟ್​ 6ರಂದು ಬಿಗ್ ಬಾಸ್ ಒಟಿಟಿ ಗ್ರ್ಯಾಂಡ್​ ಓಪನಿಂಗ್ ಮಾಡಲಾಗಿದೆ. ನಾನಾಕ್ಷೇತ್ರದಲ್ಲಿ ಗುರುತಿಸಿಕೊಂಡ ವ್ಯಕ್ತಿಗಳು ಈ ಬಾರಿಯ ಬಿಗ್ ಬಾಸ್ ಒಟಿಟಿಯಲ್ಲಿದ್ದಾರೆ. ಎಂದಿನಂತೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಬಿಗ್ ಬಾಸ್ ನಡೆಸಿಕೊಡುತ್ತಿದ್ದು ಸ್ಪರ್ಧಿಗಳಿಗೆ ಅದ್ದೂರಿ ಸ್ವಾಗತ ನೀಡಿದ್ದಾರೆ. ಅಂದಹಾಗೆ ಬಿಗ್ ಬಾಸ್ ಒಟಿಟಿಗೆ 16 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಸ್ಪರ್ಧಿಗಳು ತಮ್ಮ ಅಸಲಿ ಆಟ ಪ್ರಾರಂಭಿಸಿದ್ದಾರೆ. ಸ್ಪರ್ಧಿಗಳು ತಮ್ಮ ಕಷ್ಟದ ದಿನಗಳನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಪರ್ಧಿಗಳ ಎಮೋಷನಲ್ ವಿಡಿಯೋಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.

ನಾನು ಯಾರು ಟಾಸ್ಕ್ ನಲ್ಲಿ ಸ್ಪರ್ಧಿಗಳು ತಮ್ಮ ನೋವಿನ ಕಥೆಯನ್ನು ಬಿಚ್ಚಿಟ್ಟರು. ಬಳಿಕ ಲಿವಿಂಗ್ ಏರಿಯಾ ಸೇರಿದ ಸ್ಪರ್ಧಿಗಳು ಹರಟೆ ಹೊಡೆಯುತ್ತಿದ್ದರು. ಈ ವೇಳೆ ಖ್ಯಾತ ನಟಿ ಮಾರಿಮುತ್ತು ಮೊಮ್ಮಗಳು ತನ್ನ ಹಳೆಯ ಕಥೆ ಬಹಿರಂಗ ಪಡಿಸಿದರು. ಜಯಶ್ರೀ ಅವರು ಮಾರಿಮುತ್ತು ಮೊಮ್ಮಗಳು. ಅವರು ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಗಳಿಸಿಕೊಳ್ಳುವುದರ ಜತೆಗೆ ಉದ್ಯಮದಲ್ಲೂ ತೊಡಗಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸಿದ್ದಾರೆ. ಅವರು ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ದಾರಿ ಬಿಡ್ರಿ... ಚಿತ್ರರಂಗಕ್ಕೆ ಬಂದ್ರು ಮಾರಿಮುತ್ತು ಮೊಮ್ಮಗಳು ಜಯಶ್ರೀ! | Marimuttu fame actress Sarojamma's granddaughter Jayshree enters sandalwood - Kannada Filmibeat

ಜಯಶ್ರೀ ಮದುವೆಯಾದ ವ್ಯಕ್ತಿಯ ಜತೆ ರಿಲೇಶನ್​​ಶಿಪ್​ನಲ್ಲಿದ್ದರು. ಅವರಿಂದ ಜೂಜು ಕಲಿತರಂತೆ. ಈ ವಿಚಾರದಲ್ಲಿ ಅವರ ಬಗ್ಗೆ ಅವರಿಗೇ ಅಸಹ್ಯ ಹುಟ್ಟಿತ್ತು. ನಾನು ಹಲವರ ಜತೆ ಫ್ಲರ್ಟ್​ ಮಾಡಿದ್ದೇನೆ ಎಂದರು ಬಿಗ್​ ಬಾಸ್ ಸ್ಪರ್ಧಿ ಅರ್ಜುನ್ ರಮೇಶ್. ಈ ಘಟನೆ ಹೇಳಿಕೊಂಡ ಬಳಿಕ ಜಯಶ್ರೀ ಅವರು ತಮ್ಮ ಜೀವನದಲ್ಲಿ ಆದ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ರಾಕೇಶ್, ಅರ್ಜುನ್, ಸ್ಫೂರ್ತಿ ಗೌಡ, ಸೋಮಣ್ಣ ಮಾಚಿವಾಡ ಎಲ್ಲರೂ ಕುಳಿತ್ತಿದ್ದರು. ಆ ವೇಳೆ ಜಯಶ್ರೀ ಅರ್ಜುನ್ ಬಳಿ ಮಾತನಾಡುತ್ತಾ ನಿನ್ನ ಕಷ್ಟ ನನಗೂ ಅರ್ಥವಾಗುತ್ತದೆ. ಯಾಕೆಂದರೆ ನಾನು ಕೂಡ ಮದುವೆಯಾದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದೆ ಎಂದು ಹೇಳಿದರು. ಮದುವೆಯಾಗಿ ಆತನಿಗೆ ಮಗು ಕೂಡ ಇತ್ತು ಆದರೂ ಅವರ ಜೊತೆ ಸಂಬಂಧದಲ್ಲಿ ಇದ್ದೆ. ಬಳಿಕ ಮನೆಯವರಿಗೆಲ್ಲ ಗೊತ್ತಾಯಿತು ದೊಡ್ಡ ಜಗಳವೆ ಆಯಿತು ಎಂದು ಜಯಶ್ರೀ ತನ್ನ ಹಳೆಯ ಕಥೆ ವಿವರಿಸಿದರು

ತನ್ನ ಮತ್ತು ಸಂಬಂಧ ಹೊಂದಿದ ವ್ಯಕ್ತಿಯ ಮನೆಯವರಿಗೆ ವಿಷಯ ಗೊತ್ತಾದ ಬಳಿಕ ತುಂಬಾ ದೊಡ್ಡ ಸಮಸ್ಯೆ ಆಯಿತು. ಬಳಿಕ ನಾನು ಮನೆಬಿಟ್ಟು ಹೊರಬರಬೇಕಾಯಿತು ಎಂದು ಜಯಶ್ರೀ ಹೇಳಿದರು. ಮನೆಬಿಟ್ಟು ಬಂದ ನಂತರವೂ ಆತನ ಜೊತೆ ಇದ್ದೆ ಎಂದು ಜಯಶ್ರೀ ಹೇಳಿದರು. ಬಳಿಕ ಬ್ಯುಸಿನೆಸ್ ಮಾಡಲು ಪ್ರಾರಂಭಿಸಿದೆ ಎಂದರು. ಅಂದಹಾಗೆ ಜಯಶ್ರೀ ಸಿನಿಮಾದಲ್ಲೂ ನಟಿಸಿದ್ದಾರೆ.
ಆದರೆ ಸಿನಿಮಾ ಅವರ ಕೈ ಹಿಡಿಲಿಲ್ಲ. ಪುಟ್ಟರಾಜು ಲವರ್ ಆಫ್ ಶಶಿಕಲಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದ ಜಯಶ್ರಿಗೆ ಯಶಸ್ಸು ಸಿಕ್ಕಿದ್ದು ಬ್ಯುಸಿನೆಸ್‌ನಲ್ಲಿ. ಸಿನಿಮಾ ತನ್ನ ಕೈ ಹಿಡಿಲಿಲ್ಲ ಎಂದು ಜಯಶ್ರೀ ಬಿಗ್ ಬಾಸ್ ಮನೆಯಲ್ಲಿ ಒಪ್ಪಿಕೊಂಡಿದ್ದಾರೆ.

 

ಹಾಗಾಗಿ ಬ್ಯುಸಿನೆಸ್ ಆರಂಭಿಸಿದ ನಟಿ 50 ಲಕ್ಷ ಸಾಲ ಕೂಡ ಮಾಡಿದ್ದರು. ಸಾಲ ತೀರಿಸಲು ಪ್ರಾರಂಭದಲ್ಲಿ ತುಂಬಾ ಕಷ್ಟ ಪಟ್ಟಿದ್ದ ಜಯಶ್ರೀ ಬಳಿಕ ಯಶಸ್ಸು ಕಂಡರು. ಸಾಲ ಕೊಟ್ಟವರು ಬಂದು ಅನೇಕ ಬಾರಿ ಗಲಾಟೆ ಮಾಡುತ್ತಿದ್ದರು ಎಂದು ಜಯಶ್ರೀ ಹೇಳಿದ್ದಾರೆ. ಸದ್ಯ ಬ್ಯುಸಿನೆಸ್ ನಲ್ಲಿ ಯಶಸ್ಸು ಕಂಡಿರುವ ಜಯಶ್ರೀ ಬಿಗ್ ಬಾಸ್ ಮನೆ ಸೇರಿದ್ದಾರೆ. ಬಿಗ್ ಬಾಸ್ ಮೂಲಕ ಪ್ರೇಕ್ಷಕರನ್ನು ರಂಜಿಸಿ ಇಲ್ಲಿಯೂ ಯಶಸ್ಸು ಕಾಣುತ್ತಾರಾ ಎಂದು ಕಾದು ನೋಡಬೇಕಿದೆ.




ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.