ರಕ್ಷಿತಾ

ಸಾವಿನಲ್ಲೂ ಸಾರ್ಥಕತೆ: ತಂಗಿ ಮೃತದೇಹದ ಮುಂದೆ ‘ಗೊಂಬೆ ಹೇಳುತೈತೆ’ ಹಾಡಿ ಕಣ್ಣೀರಿಟ್ಟ ಅಣ್ಣ…

Today News / ಕನ್ನಡ ಸುದ್ದಿಗಳು

ಪುನೀತ್‌ ರಾಜ್‌ಕುಮಾರ್‌ ಅವರು ಕೇವಲ ನಟನಾಗಿ ಅಷ್ಟೇ ಅಲ್ಲ, ಒಬ್ಬ ಅದ್ಭುತ ವ್ಯಕ್ತಿತ್ವದ ವ್ಯಕ್ತಿಯಾಗಿ ಕೋಟ್ಯಂತರ ಅಭಿಮಾನಿಗಳಿಗೆ ಸ್ಫೂರ್ತಿಯಾದವರು. ಅಪ್ಪು ನಿಧನರಾದ ನಂತರ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಅಪ್ಪು ಮಾರ್ಗವನ್ನೇ ಅನುಸರಿಸಿದ ಲಕ್ಷಾಂತರ ಅಭಿಮಾನಿಗಳು ಅವರಂತೆ ನೇತ್ರದಾನ ಮಾಡಲು ದಾಖಲು ಮಾಡಿಕೊಂಡರು. ಇದೀಗ ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡಾದ ರಕ್ಷಿತಾ ಎನ್ನುವ ವಿದ್ಯಾರ್ಥಿನಿ ನಿನ್ನೆ(ಸಪ್ಟೆಂಬರ್‌ 21)ರಂದು ಕಾಲೇಜಿಗೆ ತೆರಳುವಾಗ ಆಯತಪ್ಪಿ ಬಸ್‌ನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ರಕ್ಷಿತಾ ಮೆದುಳು ನಿಷ್ಕ್ರಿಯಗೊಂಡಿತ್ತು. ಆಕೆಯನ್ನು ಮೃತ ಎಂದು ಘೋಷಿಸಲಾಯ್ತು. ಆಕೆಯ ಕುಟುಂಬಸ್ಥರು ಪುನೀತ್‌ ರಾಜ್‌ಕುಮಾರ್‌ ಅವರನ್ನೇ ಸ್ಫೂರ್ತಿಯಾಗಿಸಿಕೊಂಡು ರಕ್ಷಿತಾ ಅಂಗಾಗ ದಾನ ಮಾಡಲು ಮುಂದಾದರು. ಸಾವಿನಲ್ಲೂ ಸಾರ್ಥಕತೆ ಮೆರೆಯುವ ಮೂಲಕ ರಕ್ಷಿತಾ 9 ಜನರ ಬಾಳಿಗೆ ಬೆಳಕಾಗಿದ್ದಾರೆ. ಇಂದು(ಸಪ್ಟೆಂಬರ್ 23) ರಕ್ಷಿತಾ ಹೃದಯವನ್ನು ಬೆಂಗಳೂರಿಗೆ ಏರ್‌ ಲಿಫ್ಟ್‌ ಮಾಡಲಾಯಿತು. ಅಂಗಾಗ ದಾನಗಳ ಬಳಿಕ ವೈದ್ಯರು ರಕ್ಷಿತಾ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಮುಖಪುಟ - ಜನಶಕ್ತಿ ಮೀಡಿಯಾ | Janashakthi Media

ಬಳಿಕ ರಕ್ಷಿತಾ ಮೃತದೇಹವನ್ನು ಆಕೆ ಓದುತ್ತಿದ್ದ ಚಿಕ್ಕಮಗಳೂರು ನಗರದ ಬಸವನಹಳ್ಳಿ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ನಡೆದ ದೃಶ್ಯ ನೋಡುಗರ ಮನಕಲುಕುವಂತಿತ್ತು. ತಂಗಿ ಸಾವಿನ ನೋವಿನಲ್ಲಿದ್ದ ರಕ್ಷಿತಾ ಸಹೋದರ ಮೃತದೇಹದ ಮುಂದೆ ಪುನೀತ್‌ ರಾಜ್‌ಕುಮಾರ್‌ ಅವರ ಗೊಂಬೆ ಹೇಳುತೈತೆ..ಮತ್ತೆ ಹೇಳುತೈತೆ ಹಾಡು ಹೇಳಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ನೆರೆದಿದ್ದ ಕಾಲೇಜು ಅಧ್ಯಾಪಕ ವೃಂದದವರು, ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಪುನೀತ್‌ ರಾಜ್‌ಕುಮಾರ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಇನ್ನು ರಕ್ಷಿತಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಚಿಕ್ಕಮಗಳೂರು: ಬಸ್ ಚಲಿಸುತ್ತಿರುವಾಗಲೇ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೆದುಳು  ನಿಷ್ಕ್ರಿಯ | udayavani

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.